Sunday, July 26, 2026
Homeರಾಜ್ಯಚಿತ್ರದುರ್ಗ: ನೀರು ಕಲುಷಿತಗೊಂಡ ಶಂಕೆ,13 ಮಂದಿ ಅಸ್ವಸ್ಥ.

ಚಿತ್ರದುರ್ಗ: ನೀರು ಕಲುಷಿತಗೊಂಡ ಶಂಕೆ,13 ಮಂದಿ ಅಸ್ವಸ್ಥ.

ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಚಿತ್ರದುರ್ಗದ ಕವಾಡಿಗರಹಟ್ಟಿ ಸಮೀಪದ ಆಶ್ರಯ ಲೇಔಟ್‌ನಲ್ಲಿ 13 ಜನರು ಅತಿಸಾರ ಮತ್ತು ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇತ್ತೀಚೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು.

ಆಶ್ರಯ ಲೇಔಟ್ ನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. 13 ರೋಗಿಗಳಲ್ಲಿ 10 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು, ಮೂವರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರದೇಶದ ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಸ್ಥಳದಲ್ಲಿ ತಾತ್ಕಾಲಿಕ ಕ್ಲಿನಿಕ್ ತೆರೆಯಲಾಗಿದ್ದು, ವೈದ್ಯಾಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.

ಆಶ್ರಯ ಲೇಔಟ್ ನಿವಾಸಿ ಫಕ್ರುದ್ದೀನ್ (76) ಮತ್ತು ಕವಾಡಿಗರಹಟ್ಟಿ ನಿವಾಸಿ ಶಿವಮ್ಮ (72) ಅವರು ಗ್ಯಾಸ್ಟ್ರೋಎಂಟರೈಟಿಸ್‌ನಿಂದ ಸಾವನ್ನಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು. ಫಕ್ರುದ್ದೀನ್ ವೃದ್ಧಾಪ್ಯದಿಂದ ಸಾವನ್ನಪ್ಪಿದ್ದು, ಶಿವಮ್ಮ ಪಾರ್ಶ್ವವಾಯು ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular