Friday, July 24, 2026
Homeಕ್ರೈಂತುಮಕೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ; ಮೂವರು ಆರೋಪಿಗಳಿಗೆ ಜಾಮೀನು..!

ತುಮಕೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ; ಮೂವರು ಆರೋಪಿಗಳಿಗೆ ಜಾಮೀನು..!

ತುಮಕೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ‌ ಕಾರಾಗೃಹದಲ್ಲಿರುವ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್ ಗೆ ಜಾಮೀನು.ಈ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಆದರೆ ಜೈಲಾಧಿಕಾರಿಗೆ ಆದೇಶ ಪ್ರತಿ ತಲುಪದ ಹಿನ್ನೆಲೆ ಇಂದು ಜೈಲಿನಿಂದ ಬಿಡುಗಡೆ ಆಗೋದು ಡೌಟು ಎಂದು ತಿಳಿದಿದೆ. ನಾಳೆ ಜೈಲಿನಿಂದ ಬಿಡುಗಡೆ ಆಗಲಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ತುಮಕೂರು ಜಿಲ್ಲಾ ಕಾರಾಗೃಹದಲ್ಲಿರುವ ನಾಲ್ವರ ಪೈಕಿ ಮೂವರಿಗೆ ಜಾಮೀನು ಮಂಜೂರಾಗಿದೆ .ಎ-16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ನಿಂದ ಜಾಮೀನು. ಎ-15 ಆರೋಪಿ ಕಾರ್ತಿಕ್ ಹಾಗೂ ಎ-17 ಆರೋಪಿ ನಿಖಿಲ್ ಗೆ 57 ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular