ನವದೆಹಲಿ : ಭಯೋತ್ಪಾದಕರ ವಿರುದ್ದ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ವಿ ಮುಕ್ತಾಯದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಜೆ ಮಹತ್ವದ ಸಚಿವಸಂಪುಟ ಕರೆದಿದ್ದಾರೆ. ಸಂಜೆ ೫ ಗಂಟೆಗೆ ಸುಷ್ಮಾ ಸ್ವರಾಜ್ ಭವನದಲ್ಲಿ ಕೇಂದ್ರ ಸಚಿವ ಸಂಪುಟದ ಎಲ್ಲಾ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.
ಇದೇ ತಿಂಗಳು 9 ರಂದು ಎನ್ ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ಮತ್ತು ಮೋದಿ 3.೦ ಅವಧಿಯ ಒಂದು ವರ್ಷವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ಈ ಸಭೆ ನಡೆಯುತ್ತಿದೆ.
ಮೂಲಗಳ ಪ್ರಕಾರ,ಆಪರೇಷನ್ ಸಿಂಧೂರ: ಮಹತ್ವದ ಸಂಪುಟ ಸಭೆ ಈ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್ ಯಶಸ್ಸಿನ ಬಗ್ಗೆ ಎಲ್ಲಾ ಸಚಿವರಿಗೆ ವಿವರವಾಗಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆಗಳ ಬಗ್ಗೆಯೂ ಕಾರ್ಯಸೂಚಿ ಚರ್ಚೆಗಳನ್ನು ಒಳಗೊಂಡಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಚಿವಾಲಯಗಳಿಗೆ ತಮ್ಮ ಸಾಧನೆಗಳನ್ನು ಸಂಕಲಿಸಲು ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದೊಂದಿಗೆ ಹಂಚಿಕೊಳ್ಳಲು ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ.


