ಪುತ್ತೂರು : ನ.6 ರಂದು ಪುತ್ತೂರಿನಲ್ಲಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ರವರ ನಿವಾಸಕ್ಕೆ ಬಿ.ಜೆ.ಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್ ರವರು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು.
ಅಕ್ಷಯ್ ತಂದೆ ಚಂದ್ರಶೇಖರ್ ಗೆ ಧೈರ್ಯ ತುಂಬಿದರು ,ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡುವಂತೆ ಸಂಸದ ನಳೀನ್ ಕುಮಾರ್ ಅವರಲ್ಲಿ ಅಕ್ಷಯ್ ತಂದೆ ಚಂದ್ರಶೇಖರ್ ಆಗ್ರಹಿಸಿದರು .
ಸಂಸದ ನಳೀನ್ ಕುಮಾರ್ ಕಟೀಲ್ ಗೆ ಸಾಥ್ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು
ಸುಳ್ಯ ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಉಪಸ್ಥಿತರಿದ್ದರು.


