Wednesday, February 4, 2026
Flats for sale
Homeಜಿಲ್ಲೆಬಂಟ್ವಾಳ : ದ್ವೇಷ ಭಾಷಣ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು.

ಬಂಟ್ವಾಳ : ದ್ವೇಷ ಭಾಷಣ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು.

ಮಂಗಳೂರು : ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನ್ಯಾಯಾಲಯವು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಿದೆ. ಈ ಹಿಂದೆ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್‌ಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪರಿಗಣಿಸಿ ನ್ಯಾಯಾಲಯವು ಅರ್ಜಿಯನ್ನು ಪುರಸ್ಕರಿಸಿದೆ.

ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ ನಂತರ ಮಹೇಶ್ ಶೆಟ್ಟಿ ವಿರುದ್ಧ ದ್ವೇಷ ಭಾಷಣ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದ ಕಾರಣ ಬೆಳ್ತಂಗಡಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ತರುವಾಯ, ಮಹೇಶ್ ಶೆಟ್ಟಿ ಜಾಮೀನು ಕೋರಿ ಬಂಟ್ವಾಳ ನ್ಯಾಯಾಲಯದ ಮೊರೆ ಹೋಗಿದ್ದರು . ಅವರ ಪರವಾಗಿ ವಕೀಲ ಸಿರಾಜುದ್ದೀನ್ ಜೋಗಿಬೆಟ್ಟು ಹಾಜರಾಗಿ ವಾದ ಮಂಡಿಸಿದರು. ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಜಾಮೀನು ಅರ್ಜಿಯನ್ನು ಅಂಗೀಕರಿಸಿ ಆದೇಶ ಹೊರಡಿಸಿತು.

RELATED ARTICLES

LEAVE A REPLY

Please enter your comment!
Please enter your name here

Most Popular