Thursday, July 23, 2026
Homeರಾಜಕೀಯಬೆಂಗಳೂರು ; ಕಾಂಗ್ರೆಸ್‌ನ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿಗೆ ಸೇರ್ಪಡೆ.

ಬೆಂಗಳೂರು ; ಕಾಂಗ್ರೆಸ್‌ನ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿಗೆ ಸೇರ್ಪಡೆ.

ಬೆಂಗಳೂರು ; ಮೈತ್ರಿಕೂಟ 28 ಕ್ಷೇತ್ರಗಳಲ್ಲೂ ಗೆಲ್ಲುವುದು ನಿಶ್ಚಿತ, ಅಖಂಡ ಶ್ರೀನಿವಾಸ್‌ಮೂರ್ತಿ ಅವರ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು ಆಗ ಕಾಂಗ್ರೆಸ್‌ನವರು ಅವರ ಬೆಂಬಲಕ್ಕೆ ನಿಲ್ಲಲಿಲ್ಲ. ನಾವು ಅವರ ಜತೆ ಗಟ್ಟಿಯಾಗಿ ನಿಂತಿದ್ದೆವು ಎಂದು ಯಡಿಯೂರಪ್ಪ ನೆನಪಿಸಿಕೊಂಡರು. ಅಖಂಡ ಶ್ರೀನಿವಾಸಮೂರ್ತಿ ಅವರು ಅಪಾರ ಬೆಂಬಲಿಗರೊAದಿಗೆ ಪಕ್ಷ ಸೇರ್ಪಡೆಯಾಗಿರುವುದು ಆನೆಬಲ ಬಂದAತಾಗಿದೆ. ಅವರಿಗೆ ಪಕ್ಷದ ಪರವಾಗಿ ಸ್ವಾಗತ ಎಂದರು.

ಅಖಂಡ ಶ್ರೀನಿವಾಸ್‌ಮೂರ್ತಿ ಮಾತು ಇದೇ ಸಂದರ್ಭದಲ್ಲಿಅಖಂಡ ಶ್ರೀನಿವಾಸ್ ಮೂರ್ತಿ ಮಾತನಾಡಿ ರಾಮನವಮಿ ಸಂದರ್ಭದಲ್ಲಿ ಬಿಜೆಪಿ ಸೇರುವ ಅವಕಾಶ ಸಿಕ್ಕಿದೆ. ಶ್ರೀರಾಮನ ಆರ್ಶೀವಾದದಿಂದಾಗಿ ನನಗೆ ಅವಕಾಶ ಸಿಕ್ಕಿದೆ. ಇನ್ನು ಮುಂದೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜತೆಗೆ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಪುತ್ರ ರೇವಂತ್ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಲೆಹರ್‌ಸಿಂಗ್, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಓಬಿಸಿ ಮೋರ್ಚಾ ಉಪಾಧ್ಯಕ್ಷ ಗೋವಿಂದರಾಜ್, ಪುಲಿಕೇಶಿ ನಗರ ಮಂಡಳ ಅಧ್ಯಕ್ಷ ರವಿ ಮತ್ತಿತರರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular