Friday, March 13, 2026
Flats for sale
Homeರಾಜ್ಯಬೆಂಗಳೂರು : ಕ್ರಿಮಿನಲ್ ಮೊಕದ್ದಮೆ ಇದ್ದವರಿಗೆ ಪಾಸ್‌ಪೋರ್ಟ್ ನವೀಕರಣವಿಲ್ಲ: ಹೈಕೋರ್ಟ್.

ಬೆಂಗಳೂರು : ಕ್ರಿಮಿನಲ್ ಮೊಕದ್ದಮೆ ಇದ್ದವರಿಗೆ ಪಾಸ್‌ಪೋರ್ಟ್ ನವೀಕರಣವಿಲ್ಲ: ಹೈಕೋರ್ಟ್.

ಬೆಂಗಳೂರು : ಇದಕ್ಕಿಂತ ಮೊದಲು ಕ್ರಿಮಿನಲ್ ಮೊಕ್ಕದ್ದಮೆ ಇದ್ದವರು ಎಲ್ಲಾ ಹೊರದೇಶಕ್ಕೆ ಪರಾರಿಯಾಗಿದ್ದಾರೆ ಆದರೆ ಪ್ರಸ್ತುತ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ನೀಡಿಕೆ, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಸಂತೋಷ ಬೀಜಾಡಿ ಶ್ರೀನಿವಾಸ ಅವರ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, “ವ್ಯಕ್ತಿಯ ಕ್ರಿಮಿನಲ್ ಮೊಕದ್ದಮೆಯನ್ನು ಪರಿಗಣಿಸದೆ ಆತನಿಗೆ ಪಾಸ್‌ಪೋರ್ಟ್ನ ವಿತರಣೆ ಅಥವಾ ನವೀಕರಣ, ಮರು ನೀಡುವಂತೆ ಪಾಸ್‌ಪೋರ್ಟ್ ಕಾಯ್ದೆಯಲ್ಲಿ ಎಲ್ಲಿಯೂ ಹೇಳಿಲ್ಲ ಎಂದು ಹೇಳಿದರು.

ಸೆಕ್ಷನ್ 6(2)(ಎಫ್) ಅಡಿಯಲ್ಲಿ ಪಾಸ್‌ಪೋರ್ಟ್ ವಿತರಣೆಗೆ ನಿಯಮಗಳನ್ನು ರೂಪಿಸಲಾಗಿದೆ. ಈ ನಿಯಮಗಳ ಪ್ರಕಾರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್, ನವೀಕರಣ ಅಥವಾ ಮರು ವಿತರಣೆ ನೀಡುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ಆದಾಗ್ಯೂ, ಸಂತೋಷ ಬೀಜಾಡಿ ಶ್ರೀನಿವಾಸ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು ಮತ್ತು ಅಲ್ಪಾವಧಿಯ ಪಾಸ್‌ಪೋರ್ಟ್ ನೀಡುವಂತೆ ಕೋರಬಹುದು. ಆದರೆ ಸೆಷನ್ಸ್ ನ್ಯಾಯಾಲಯವು ಅಂತಹ ಅರ್ಜಿಯನ್ನು ಕಾಯ್ದೆಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ಏಪ್ರಿಲ್11, 2014 ರಂದು ಅರ್ಜಿದಾರ ಶ್ರೀನಿವಾಸ ಅವರಿಗೆ ಪಾಸ್‌ಪೋರ್ಟ್ ನೀಡಲಾಯಿತು, ಇದು ಏಪ್ರಿಲ್ 10, 2024 ರವರೆಗೆ ಮಾನ್ಯವಾಗಿತ್ತು. ಈ ಅವಧಿಯಲ್ಲಿ, ಅರ್ಜಿದಾರರು ಸೆಕ್ಷನ್ 302, 201, 120- ಬಿ ಮತ್ತು 182 ರ ಅಡಿಯಲ್ಲಿ ಅಪರಾಧ ಎಸಗಿದ್ದಾರೆ.

ತುಮಕೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗಲೇ ಶ್ರೀನಿವಾಸ ಪಾಸ್‌ಪೋರ್ಟ್ ಮರು ನೀಡಿಕೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ಕ್ರಿಮಿನಲ್ ಪ್ರಕರಣದ ಕಾರಣದಿಂದ ಅವರ ಅರ್ಜಿಯನ್ನು ತಿರಸ್ಕರಿಸಿತು. ಹೀಗಾಗಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದರು.

RELATED ARTICLES

LEAVE A REPLY

Please enter your comment!
Please enter your name here

Most Popular