ಬೆಂಗಳೂರು : ಆರ್ಎಸ್ಎಸ್ ಶತಮಾನೋತ್ಸವ ಅಂಗವಾಗಿ ಇಂದು ಹಾಗೂ ನಾಳೆ ಬೆಂಗಳೂರಿನಲ್ಲಿ ಹಮ್ಮಿ ಕೊಂಡಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿಯಾಗಲಿದ್ದಾರೆ. ಜೊತೆಗೆ ದತ್ತಾತ್ರೇಯ ಹೊಸಬಾಳೆಯವರು ಕೂಡ ಬಾಗಿಯಾಗಲಿದ್ದಾರೆ.
ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಕೇರಳದಿಂದ ೧೨೦೦ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸಂಘಕ್ಕೆ ೧೦೦ ವರ್ಷ ಹಿನ್ನೆಲೆ ದೇಶಾದ್ಯಂತ ಆರೆಸ್ಸೆಸ್ಸ ಸಂಭ್ರಮಾಚರಣೆಯ ಕಾರ್ಯಕ್ರಮಗಳನ್ನು ನಡೆಸುತ್ತಿದೆ.


