ಬೆಳಗಾವಿ : ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಕಾಲ್ತುಳಿದಲ್ಲಿ ಬೆಳಗಾವಿ ನಾಲ್ವರು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರ ವಿತರಣೆ ಮಾಡಿದೆ.
ಮೃತಪಟ್ಟ ನಾಲ್ವರಿಗೆ ತಲಾ 25 ಲಕ್ಷದಂತೆ 1 ಕೋಟಿ ಪರಿಹಾರ ವಿತರಿಸಿದ್ದು ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಅಕೌಂಟ್ ಹಣ ಜಮಾವನೆಮಾಡಿದ್ದಾರೆ.
ಡಿಸಿ ಮೊಹಮ್ಮದ್ ರೋಷನ್ ರಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ಮೊತ್ತ ವಿತರಿಸಿದ್ದು ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆಮಾಡಲಾಗಿದೆ.
ಜನವರಿ 29 ರಂದು ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನಕ್ಕೆ ಹೋಗಿದ್ದಾಗ ಕಾಲ್ತುಳಿತಕ್ಕೆ ಬಲಿಯಾಗಿದ್ದು,ಬೆಳಗಾವಿಯ ತಾಯಿ ಮಗಳು ಜೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ, ಮಹಾದೇವಿ ಬಾವನೂರ ಕಾಲ್ತುಳಿದಲ್ಲಿ ಬಲಿಯಾಗಿದ್ದರು. 40 ದಿನಗಳ ಬಳಿಕ ಯುಪಿ ಸರ್ಕಾರ ಘೋಷಿಸಿದಂತೆ ಪರಿಹಾರ ಮೊತ್ತ ವಿತರಣೆ ನೀಡಿದ್ದು ಇತ್ತ ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನಿಸಲಾಗಿದೆ.