ಬೆಳ್ತಂಗಡ : ಮಹಿಳೆಯರು ಮತ್ತು ಮಕ್ಕಳಿಗೆ ಮಚ್ಚಿನಿಂದ ನಿಂದಿಸಿ ಬೆದರಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಂಡೂರು ನಿವಾಸಿ ಆನಂದ ಆಚಾರ್ಯ (38) ಎಂದು ಗುರುತಿಸಲಾಗಿದೆ.
ಮುಂಬರುವ ಮಹಾಮಸ್ತಕಾಭಿಷೇಕದ ನಿಮಿತ್ತ ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ತರಬೇತಿ ನಡೆಯುತ್ತಿದೆ. ಸ್ಥಳಕ್ಕಾಗಮಿಸಿದ ಆರೋಪಿಗಳು ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದು, ಮಚ್ಚಿನಿಂದ ಹಲ್ಲೆನಡೆಸಿದ್ದಾನೆ.
ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವೇಣೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


