ಮಂಗಳೂರು : ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 14 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಸೆ.5ರಂದು ಮಂಗಳವಾರ ಬಂಧಿಸಲಾಗಿದೆ. ನಗರದ ನ್ಯೂ ಚಿತ್ರಾ ಟಾಕೀಸ್ ಬಳಿಯ ನಿವಾಸಿ ರಾಜೇಶ್ (52) ಬಂಧಿತ ಆರೋಪಿ. ರಾಜೇಶ್ ವಿರುದ್ಧ ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಈತನನ್ನು ಕಾಸರಗೋಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಓಂದಾಸ್, ಎಚ್.ಸಿ.ಮಚ್ಚೇಂದ್ರನಾಥ್ ಪಾಲ್ಗೊಂಡಿದ್ದರು.


