ಮಂಗಳೂರು : ಪ್ರಭು ಶ್ರೀರಾಮ ಮಂದಿರಕ್ಕೆ ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಲು ವಿಶೇಷ ರೈಲು ಸೇವೆ ನೀಡಲಾಗುತ್ತಿದೆ.
ರೈಲು ಸಂಖ್ಯೆ 06517 ಕೊಯಮತ್ತೂರು-ದರ್ಶನ್ ನಗರ-ಕೊಯಮತ್ತೂರು ಆಸ್ತಾ, ಫೆಬ್ರವರಿ 8 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಹೊರಟು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಮೂಲಕ ಅಯೋಧ್ಯೆ ಜಂಕ್ಷನ್ಗೆ ಪ್ರಯಾಣಿಸಲಿದೆ.
ಫೆಬ್ರವರಿ 8 ರಂದು ಸಂಜೆ 5:50 ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಿ 6 ಗಂಟೆಗೆ ಹೊರಡಲಿದೆ. ರೈಲು ಫೆಬ್ರವರಿ 11 ರಂದು ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ತಲುಪಲಿದೆ.ಫೆಬ್ರವರಿ 12 ರಂದು ಬೆಳಿಗ್ಗೆ 8 ಗಂಟೆಗೆ ಅಯೋಧ್ಯೆಯಿಂದ ಹಿಂದುರುಗಿ ಫೆಬ್ರವರಿ 14 ರ ಸಂಜೆ ಮಂಗಳೂರು ಜಂಕ್ಷನ್ಗೆ ತಲುಪಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.


