Friday, March 6, 2026
Flats for sale
Homeಜಿಲ್ಲೆಮಂಗಳೂರು : ಕೌಟುಂಬಿಕ ಕಲಹ - ಸಂಚಾರ ಪೊಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಮಂಗಳೂರು : ಕೌಟುಂಬಿಕ ಕಲಹ – ಸಂಚಾರ ಪೊಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಮಂಗಳೂರು : ಸಂಚಾರ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.14 ಗುರುವಾರದಂದು ನಡೆದಿದೆ.

ಮೃತರನ್ನು ಗದಗ ನಿವಾಸಿ ವೀರಣ್ಣ ಎಂಬುವರ ಮಗನಾಗಿ 1992ರಲ್ಲಿ ಜನಿಸಿದ ಮಹೇಶ ಸವದತ್ತಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಕೌಟುಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎಂಬುದು ತಿಳಿದುಬಂದಿದೆ.

ಅವರು ಜುಲೈ 23, 2018 ರಂದು ಪೊಲೀಸ್ ಇಲಾಖೆಗೆ ನೇಮಕಗೊಂಡರು, ಹಾಸನದಲ್ಲಿ ಪ್ರಾಥಮಿಕ ತರಬೇತಿಯನ್ನು ಪಡೆದರು ಮತ್ತು ಮೇ 7, 2019 ರಂದು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ತಮ್ಮ ಕರ್ತವ್ಯವನ್ನು ಪ್ರಾರಂಭಿಸಿದರು.

ಮಹೇಶ್ ಅವರು ಕಪಿತಾನಿಯೊದ ಸೈಮನ್ ಲೇನ್‌ನಲ್ಲಿರುವ ತಮ್ಮ ಬಾಡಿಗೆ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular