ಮಂಗಳೂರು : ಜಾರಿಗೆಕಟ್ಟೆ ಕೊರಗಜ್ಜ ಕೊರಗರ ಪಂಜುರ್ಲಿ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿಯವರು ಅಕಾಲಿಕ ಮರಣಹೊಂದಿದ್ದಾರೆ.
ಅವರು ದೈವಾಧೀನರಾಗಿರುವುದು ದಿಗ್ಬ್ರಮೆ ಮೂಡಿಸಿದೆ. ಧಾರ್ಮಿಕ, ಸಾಮಾಜಿಕ ಕಾರ್ಯಗಳ ಮೂಲಕ ತೊಡಸಿಕೊಂಡಿದ್ದ ಅವರು ನಿಧನರಾಗಿರುವುದು ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರು, ಬಂಧುಮಿತ್ರರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಶ್ರೀ ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.


