ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತಮಜಲಿನಲ್ಲಿ ನಡೆದ ಅಬ್ದುಲ್ ರಹೀಂ ಎಂಬಾ ಕೂಲಿ ಕಾರ್ಮಿಕನನ್ನು 27- 05- 2025 ಮಂಗಳವಾರ ದುಷ್ಟ ಶಕ್ತಿಗಳು ಅತ್ಯಂತ ಕ್ರೂರವಾಗಿ ಹತ್ಯೆಗೈದಿದ್ದಿದ್ದು ಅವನ ಜೊತೆಗಿದ್ದ ಖಲಂದರ್ ಎನ್ನುವ ಯುವಕನಿಗೂ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಕೊಲೆಯಿಂದ ಪಾರಾಗಿದ್ದಾನೆ. ಜಿಲ್ಲೆಯಲ್ಲಿ ಕೋಮು ಪ್ರೇರಿತ ಕೊಲೆಗಳ ಸರಣಿ ಮುಂದುವರಿಯುತ್ತಿದ್ದು ದ.ಕ ಜಿಲ್ಲೆಯಲ್ಲಿ ಇದು ಸಾರ್ವಜನಿಕರನ್ನು ಭಯಭೀತರಾಗಿಸಿದೆ. ಜನ ಸಾಮಾನ್ಯರ ವಿಶೇಷಮುಂದುವರಿ ಕೆಲಸ ಮಾಡಿ ಬದುಕುವವರ ಬದುಕಿನ ದಾರಿಯನ್ನು ಇದು ಕಸಿಯುತ್ತಿದೆ ಎಂದು SKSSF ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿಯವರು ತಿಳಿಸಿದ್ದಾರೆ.
ಕಾನೂನಿನ ಭಯವಿಲ್ಲದೆ ಕೋಮುವಾದಿ ಶಕ್ತಿಗಳು ನಿರಂತರ ದ್ವೇಷ ಭಾಷಣಗಳನ್ನು ನಡೆಸುತ್ತಿರುವುದರ ಪರಿಣಾಮ ಫಲವಾಗಿ ರಹೀಮನ ಹತ್ಯೆ ನಡೆದಿದೆ. ಈ ದುಷ್ಕೃತ್ವದ ಕೊಲೆಗಾರರು ಮತ್ತು ಸಂಚು ರೂಪಿಸಿದವರು ಮತ್ತು ಪ್ರಚೋದನಕಾರಿ ಭಾಷಣ ನಡೆಸಿದವರನ್ನು ಅತಿ ಕ್ಷಿಪ್ರವಾಗಿ ಬಂಧಿಸಿ ಕಠಿಣ ಶಿಕ್ಷೆ ಜಾರಿಗೊಳಿಸಬೇಕು. ಇಲ್ಲದಿದ್ದರೆ SKSSF ಸಂಘಟನೆಯು ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆಯನ್ನು ನಡೆಸಲಿದೆ ಎಂದು ತಿಳಿಸಿದ್ದಾರೆ.
ಮೃತ ಅಬ್ದುಲ್ ರಹೀಂ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಂಡು ಬದುಕಿದಂತಹ ವ್ಯಕ್ತಿಯಾಗಿದ್ದು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವನಲ್ಲ. ದಕ್ಷಿಣ ಕನ್ನಡ ಜಿಲ್ಲೆಯ 500 ರಷ್ಟು ಮೊಹಲ್ಲಾ ಗಳಿಗೆ ನೇತೃತ್ವ ನೀಡುತ್ತಿರುವ SKSSF ಎನ್ನುವ ಧಾರ್ಮಿಕ ಯುವಜನ ಸಂಘಟನೆಯ ಕಾರ್ಯಕರ್ತ ಮತ್ತು ಸ್ಥಳೀಯ ಮೊಹಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆನಿರ್ವಹಿಸುತ್ತಿದ್ದ. ಜೊತೆಗೆ, ತನ್ನ ಪಾಡಿಗೆ ದುಡಿದು ಕುಟುಂಬ ಸಾಕುತ್ತಿದ್ದ ಎಲ್ಲಾ ಧರ್ಮೀಯರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿದ್ದ ಅಮಾಯಕ ಅಬ್ದುಲ್ ರಹೀಂ ಕುಟುಂಬಕ್ಕೆ ಸರ್ಕಾರದ ವತಿಯಿಂದ 50 ಲಕ್ಷ ರೂ. ಪರಿಹಾರ ಧನ ಸಹಾಯ ತಕ್ಷಣ ಮಂಜೂರು ಮಾಡಬೇಕೆಂದು ಸರಕಾರವನ್ನು ಆಗ್ರಹಿಸಿದ್ದಾರೆ.ಮೃತ ಅಬ್ದುಲ್ ರಹೀಂ ಸ್ಮರಣಾರ್ಥ ಜಿಲ್ಲೆಯ 100 ಕೇಂದ್ರಗಳಲ್ಲಿ ರಕ್ತದಾನ ಹಾಗೂ 300 ಶಾಖಾ ಕೇಂದ್ರಗಳಲ್ಲಿ ಪ್ರಾರ್ಥನಾ ಸಂಗಮ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ಕೋಮು ದ್ವೇಷ ಭಾಷಣ ಮಾಡುವವರನ್ನು ಕೂಡಲೇ ಬಂಧಿಸಬೇಕು. ಈ ದುಷ್ಕೃತ್ಯದ ಕೊಲೆಗಾರರು ಮತ್ತು ಸಂಚು ರೂಪಿಸಿದವರ ವಿರುದ್ಧ ಕಠಿಣ ಕ್ರಮ ಕ್ಷಿಪ್ರವಾಗಿ ಜರುಗಬೇಕು ಸರಕಾರವನ್ನು ಒತ್ತಾಯಿಸಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ SKSSF ರಾಜ್ಯ ಸಮಿತಿ ಅಧ್ಯಕ್ಷ ರಫೀಖ್ ಅಹ್ಮದ್ ಹುದವಿ ಮುಷ್ಟಿ, ಕೋಶಾಧಿಕಾರಿ ಸೆಯ್ಯದ್ ಅಮೀರ್ ತಂಜಳ್ ಕಿನ್ಯ, ಪ್ರ. ಕಾರ್ಯದರ್ಶಿ ಓ.ಪಿ ಅಶ್ರಫ್, SKSSF ರಾಜ್ಯ ಸಮಿತಿ ಕಾರ್ಯಕಾರಿ ಸದಸ್ಯ
ಖಾಸಿಂ ದಾರಿಮಿ, ರಿಯಾಜ್ ರಹ್ಮಾನಿ ಕಾರ್ಯಕಾರಿ ಸದಸ್ಯ, ತಾಜುದ್ದಿನ್ ರಹ್ಮಾನಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.


