ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ಜೀವನ್ ಪಿಂಟೋ (48) ಅವರ ಮೃತದೇಹ ಸೋಮವಾರ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ.
ಘಟನೆಯ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಎರಡು ದಿನಗಳಿಂದ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೂ ಸಂಗಬೆಟ್ಟು ಬಳಿ ಮೃತದೇಹ ಪತ್ತೆಯಾಗಿದ್ದು, ಬಳಿಕ ಅಧಿಕಾರಿಗಳು ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಕ್ರಮ ಕೈಗೊಂಡರು.
ಮೃತದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಯಿತು.

