ಮಂಗಳೂರು : ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಯುವಕ ನಿತಿನ್ ಸುವರ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭಾರತ್ ಶೆಟ್ಟಿ ಯವರರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ನಿನ್ನೆ ರಾತ್ರೆ ಹಲವು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಮಾಹಿತಿ ದೊರೆತಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ ಆದರೆ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರೆಂದು ಮಾಹಿತಿ ದೊರೆತಿದೆ,ಮೂಲತಃ ಮರೋಳಿ ನಿವಾಸಿಯಾದ ನಿತಿನ್ಮ ಣ್ಣಗುಡ್ಡ ಬಳಿಯ ಗುಂಡೂರಾವ್ ಲೇನ್ ಬಳಿ ಫ್ಲಾಟ್ ನಲ್ಲಿ ತಾಯಿ ಜೊತೆ ನೆಲೆಸಿದ್ದರು. ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


