Thursday, March 12, 2026
Flats for sale
Homeಜಿಲ್ಲೆಮಂಗಳೂರು : ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ : ಬದಲಿ ಮಾರ್ಗ ಬಳಸಲು ಪೊಲೀಸ್...

ಮಂಗಳೂರು : ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ : ಬದಲಿ ಮಾರ್ಗ ಬಳಸಲು ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ..!

ಮಂಗಳೂರು : ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ತಲಪಾಡಿ – ಮಂಗಳೂರು ನಗರಕ್ಕೆ ಬರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್ 01-04-2025 ರಿಂದ 3೦ ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿಯನ್ನು ನಡೆಯಲಿದ್ದು ಈಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪುವೆಲ್ನಿಂದ ತೊಕ್ಕೊಟ್ಟು ವರೆಗೆ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ ಎಂದು ಇಲಾಖೆ ತಿಳಿಸಿದೆ.

ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾದ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ಸ್ ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ಕಡಿಮೆ ಮಾಡಲು ಕೋರಿದೆ.

ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವ್ವಿ-ಚಕ್ರ ವಾಹನಗಳು ಕೊಣಾಜೆ- ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದ್ದು ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು ಉತ್ತಮ ಎಂದು ತಿಳಿಸಿದೆ.

ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು – ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು, ಬಿ.ಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು ಉತ್ತಮ ವೆಂದು ನಗರ ಸಂಚಾರಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular