ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ.
ಇಬ್ಬರು ಅಧಿಕಾರಿಗಳ ಪೈಕಿ ಒಬ್ಬರು ಕ್ಯಾಪ್ಟನ್ ಎಂವಿ ಪ್ರಾಂಜಲ್ (29) ಮೈಸೂರು ಮೂಲದವರಾಗಿದ್ದಾರೆ. ಎಂ.ವೆಂಕಟೇಶ್ ಅವರ ಪುತ್ರರಾದ ಇವರು ಹಲವಾರು ವರ್ಷಗಳ ಕಾಲ ಎಂಆರ್ಪಿಎಲ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಕ್ಯಾಪ್ಟನ್ ಪ್ರಾಂಜಲ್ ವೆಂಕಟೇಶ್ ಅವರ ಒಬ್ಬನೇ ಮಗನಾಗಿದ್ದು ,ಮಂಗಳೂರಿನ ಸುರತ್ಕಲ್ನ ಎಂಆರ್ಪಿಎಲ್ ಬಳಿ ಇರುವ ಡೆಲ್ಲಿ ಪಬ್ಲಿಕ್ ಸ್ಕೂಲ್ನಲ್ಲಿ ಎಸ್ಎಸ್ಎಲ್ಸಿವರೆಗೆ ಓದಿದ್ದಾರೆ. ನಂತರ, ಅವರು ತಮ್ಮ ಎಂಜಿನಿಯರಿಂಗ್ ಪದವಿಯನ್ನು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಪೂರ್ಣಗೊಳಿಸಿದರು.
ಭಯೋತ್ಪಾದಕರ ವಿರುದ್ಧ ಹೋರಾಡುವ ರಾಷ್ಟ್ರಕ್ಕಾಗಿ ಹುತಾತ್ಮರಾದಾಗ ಕ್ಯಾಪ್ಟನ್ ಪ್ರಾಂಜಲ್ ಅವರು ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಆಗಿ ಬಡ್ತಿ ಹೊಂದಲಿದ್ದಾರೆ.
ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಬನ್ನೇರುಘಟ್ಟದಲ್ಲಿ ಸೇನಾ ಗೌರವದೊಂದಿಗೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.


