ಸುಳ್ಯ ; ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತ ನಡೆದಿದೆ.
ಕಾರಿನಲ್ಲಿದ್ದ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದ್ದು ಕಾರನಲ್ಲಿದ್ದವರು ಸಿದ್ಧಾಪುರ ಮೂಲದವರೆಂದು ತಿಳಿದು ಬಂದಿದೆ.