Friday, March 13, 2026
Flats for sale
Homeರಾಜಕೀಯಹಾಸನ ; ಏಕಾದಶಿಯ ಪೂಜೆಮುಗಿಸಿ ಬರುವ ವೇಳೆ ಕಾಲು ಜಾರಿ ಬಿದ್ದ ಎಚ್.ಡಿ.ರೆವಣ್ಣ,ಪಕ್ಕೆಲುಬಿಗೆ ತೀವ್ರ ಪೆಟ್ಟಾಗಿ...

ಹಾಸನ ; ಏಕಾದಶಿಯ ಪೂಜೆಮುಗಿಸಿ ಬರುವ ವೇಳೆ ಕಾಲು ಜಾರಿ ಬಿದ್ದ ಎಚ್.ಡಿ.ರೆವಣ್ಣ,ಪಕ್ಕೆಲುಬಿಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲು.

ಹಾಸನ : ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್.ಡಿ.ರೇವಣ್ಣ
ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಬೇಟಿನೀಡಿ ಪೂಜೆ ಸಲ್ಲಿಸಿ ಬರುವ ವೇಳೆ ಎಚ್.ಡಿ.ರೇವಣ್ಣ ಕಾಲು ಜಾರಿ ಬಿದ್ದ ಘಟನೆ ನಡೆದಿದೆ.

ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ತೀವ್ರ ಪಕ್ಕೆಲುಬು ನೋವಿನಿಂದ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್‌.ಡಿ.ರೇವಣ್ಣ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular