Friday, March 13, 2026
Flats for sale
Homeರಾಜ್ಯಹಾಸನ : ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ.

ಹಾಸನ : ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ.

ಹಾಸನ : ಇತ್ತೀಚಿನ ದಿನಗಳಲ್ಲಿ ಅಂತೂ ಈ ಕಾಡು ಪ್ರಾಣಿಗಳ ದಾಳಿಯಿಂದ ಹಲವು ಜನರು ಬಲಿಯಾಗುವುದು ವರದಿಯಾಗುತ್ತ ಇದೆ ಆದರೆ ಅರಣ್ಯ ಇಲಾಖೆಯ ನಿರ್ಲ್ಯಕ್ಸ್ಯದಿಂದ ಇಂತಹ ಘಟನೆಗಳು ನಡೆಯುತ್ತಾ ಇದೆ ಎಂಬುದು ಜನರ ಆಕ್ರೋಶದ ಮಾತು ,ಹಳ್ಳಿಗಾಡಿನ ಜನರು ಮನೆಯಿಂದ ಹೊರನಡೆಯಲು ಹಿಂಜರಿಯುವ ಸಮಯ ಬಂದಿದೆ. ಹಾಸನ ಜಿಲ್ಲೆಯ ಬೇಲೂರಿನ ಮತ್ತಾವರದಲ್ಲಿ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕನೋರ್ವ ಒಂಟಿ ಸಲಗದ ದಾಳಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಸಂಭವಿಸಿದೆ. ನಿರಂತರವಾಗಿ ಆನೆ ದಾಳಿಗಳಿಗೆ ಜನರು ಬಲಿಯಾಗುತ್ತಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ವರೆಗೆ ಶವವನ್ನು ಸ್ಥಳದಿಂದ ಮೇಲೆತ್ತಲು ಬಿಡಲ್ಲ ಎಂದು ಜನರು ಧರಣಿ ಆರಂಭಿಸಿದ್ದಾರೆ. ನಿಮ್ಮ ಪರಿಹಾರ ಬೇಡ ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಎಂದು ಜನ ಪಟ್ಟು ಹಿಡದಿದ್ದಾರೆ.

ಒಂದು ತಿಂಗಳಿಗೆ ಸರಿಯಾಗಿ ಒಂಟಿ ಸಲಗದ ದಾಳಿಗೆ ಅಮಾಯಕ ಕಾರ್ಮಿಕನೋರ್ವ ಬಲಿಯಾಗಿದ್ದು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ದಿನೇ ದಿನೆ ಹೆಚ್ಚಾಗುತ್ತಿರೋದಕ್ಕೆ ಸಾಕ್ಷಿ ಹೇಳುತ್ತಿದೆ. ಹಾಸನ ಜಿಲ್ಲೆಯಲ್ಲಿ ಇಂದಿಗೆ ಸರಿಯಾಗಿ ಒಂದು ತಿಂಗಳ ಹಿಂದೆ ಜನರಿಗೆ ಕಂಟಕವಾಗಿದ್ದ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ದಾರುಣವಾಗಿ ಮೃತಪಟ್ಟಿದ್ದ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ವಸಂತ್ (45) ಗುರುವಾರ ಸಂಜೆ ಕೆಲಸ ಮುಗಿಸಿ ತನ್ನ ಆಪ್ತನ ಜೊತೆಗೆ ವಾಪಸ್ ಮರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಣಿಸಿದ ಒಂಟಿ ಸಲಗ ವಸಂತ್ ಮೇಲೆ ದಾಳಿ ಮಾಡಿದೆ. ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಅಪಾಯದಿಂದ ಪಾರಾಗಿದ್ದಾರೆ. ಸಂಜೆ ಸುಮಾರು 6-30ರ ವೇಳೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಮೃತದೇಹ ಮೇಲೆತ್ತಲು ಬಿಡದೆ ಸ್ಥಳೀಯರು ಅಹೋರಾತ್ರಿ ಪ್ರತಿಭಟನೆ ಶುರುಮಾಡಿದ್ದರು.

ನಿಮ್ಮ ಪರಿಹಾರ ನಮಗೆ ಬೇಡ. ಓರ್ವ ಮನುಷ್ಯ ಬಲಿಯಾದ್ರೆ 15 ಲಕ್ಷ ಬೆಲೆ ಕಟ್ಟುತ್ತೀರಿ. ಒಂದು ವರ್ಷಕ್ಕೆ ಮನುಷ್ಯ 15 ಲಕ್ಷ ದುಡಿಯುತ್ತಾನೆ. ಅಂತಹವರ ಜೀವವೇ ಹೋದರೂ ಸರ್ಕಾರ ಗಮನ ಹರಿಸಿಲ್ಲ. ಹಾಗಾಗಿಯೇ ಶವ ಇಲ್ಲೇ ಇಟ್ಟು ಹೋರಾಟ ಮಾಡುತ್ತೇವೆ. ಬೆಳಿಗ್ಗೆಯೇ ಅಧಿಕಾರಿಗಳು ಬರಲಿ, ನಮ್ಮ ಜೀವ ಹಿಂಡುತ್ತಿರೊ ಸಮಸ್ಯೆಗೆ ಪರಿಹಾರ ನೀಡಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಆನೆಗಳ ಹಿಂಡು ಕಾಫಿತೋಟ, ಗ್ರಾಮ, ಭತ್ತ ಗದ್ದೆಗಳಲ್ಲಿ ಓಡಾಡುತ್ತಾ ಬೆಳೆ ಹಾನಿ ಜೊತೆಗೆ ಜೀವ ಹಾನಿಯನ್ನೂ ಮಾಡುತ್ತಿವೆ. ಕಾಡಾನೆಗಳ ಹಾವಳಿಯಿಂದ ಆಗುತ್ತಿರೋ ಮಾನವ ಪ್ರಾಣ ಹಾನಿಯನ್ನು ತಡೆಯಲೆಂದೇ ಸರ್ಕಾರ ಹಾಲಿ ಇದ್ದ ಆರ್.ಆರ್.ಟಿ ಟೀಂ ಗಳ ಜೊತೆಗೆ ಇಟಿಎಫ್ ಕಾಡಾನೆ ಕಾರ್ಯಾಚರಣೆ ಪಡೆ ಹೆಸರಿನಲ್ಲಿ ಹೊಸ ಟೀಂ ರಚನೆ ಮಾಡಿ ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಾ ಮಾನವ ಪ್ರಾಣ ಹಾನಿ ತನಡೆಯಲು ಪ್ರಯತ್ನ ಮಾಡಿತ್ತು. ಆದರೆ ಇದ್ಯಾವುದೂ ಇದೀಗ ಲೆಕ್ಕಕ್ಕಿಲ್ಲ ಎಂಬಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular