Saturday, March 14, 2026
Flats for sale
Homeರಾಜಕೀಯಹಾಸನ : ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್.

ಹಾಸನ : ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್.

ಹಾಸನ : ಕಳೆದ ಲೋಕಸಭೆ ಚುನಾವಣೆಗೂ ಮುನ್ನ ನಾಮಪತ್ರ ಸಲ್ಲಿಸುವಾಗ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ರಾಜ್ಯ ಹೈಕೋರ್ಟ್ ಅನರ್ಹಗೊಳಿಸಿದೆ.

ಪ್ರಜ್ವಲ್ ರೇವಣ್ಣ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ನ್ಯಾಯಮೂರ್ತಿ ಕೆ ನಟರಾಜನ್ ಅವರು ಈ ಆದೇಶ ಹೊರಡಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಹಾಸನದ ಬಿಜೆಪಿ ಅಭ್ಯರ್ಥಿ ಎ ಮಂಜು ಅವರು ತಮ್ಮ ವಕೀಲ ದೇವರಾಜೇಗೌಡ ಅವರ ಮೂಲಕ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿ ಅನರ್ಹಗೊಳಿಸುವಂತೆ ಒತ್ತಾಯಿಸಿದ್ದರು.

ದೇವರಾಜೇಗೌಡ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ, ''ಪ್ರಜ್ವಲ್ ಸರಕಾರಿ ಜಾಗ ಖರೀದಿಸಿದ್ದಾರೆ. ಅವರು ಆದಾಯ ತೆರಿಗೆ ಪಾವತಿಸಿಲ್ಲ. ಈತ ಬೇನಾಮಿ ಆಸ್ತಿ ಸಂಪಾದಿಸಿದ್ದಾನೆ. ಹೊಳೆನರಸೀಪುರದ ಚೆನ್ನಾಂಬಿಕಾ ಸಮಾವೇಶ ಕೇಂದ್ರ ಕನಿಷ್ಠ ಐದು ಕೋಟಿ ರೂ. ಆದರೆ, ಅದರ ಮೌಲ್ಯವನ್ನು ಕೇವಲ 14 ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ವೃತ್ತದ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ 48 ಲಕ್ಷ ರೂಪಾಯಿ ಹೊಂದಿದ್ದರೂ, ಪ್ರಜ್ವಲ್ ಕೇವಲ ಐದು ಲಕ್ಷ ರೂಪಾಯಿ ಎಂದು ತೋರಿಸಿದ್ದಾನೆ.ಈ ಪ್ರಕರಣ ಹೈ ಕೋರ್ಟ್ ಎತ್ತಿ ಹಿಡಿದಿದ್ದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ರಾಜ್ಯ ಹೈಕೋರ್ಟ್ ಅನರ್ಹಗೊಳಿಸಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular